ದಿನಾಂಕ 01-08-2022 ರ ಬೆಳಿಗ್ಗೆ 10-00 ಗಂಟೆಗೆ ಕಂದಗಲ್ ಶ್ರೀ ಹಣಮಂತರಾಯ ರಂಗ ಮಂದಿರ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಸಭಾಪತಿಗಳಾದ ಸನ್ಮಾನ್ಯ ಶ್ರೀ ವೀಶ್ವೇಶ್ವರ ಹೆಗಡೆ ಕಾಗೇರಿಯವರ ಉಪಸ್ಥಿತಿಯಲ್ಲಿ ” *ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ “* ಕುರಿತು ಜಿಲ್ಲೆಯ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಇನ್ನಿತರ ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆ ಪದಾಧಿಕಾರಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮಕ್ಕೆ ಅಂಜುಮನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ರಾಜ್ಯಶಾಸ್ತ್ರವಿಭಾಗದ ಪ್ರಾಧ್ಯಾಪಕರಾದ ಪ್ರೊ. ಮಹಮ್ಮದಗೌಸ ಪಿತಲಿರವರು ಭಾಗಹಿಸಿದ್ದರು.


